ಬೆಂಗಳೂರು: ಕರ್ನಾಟಕದ ಶರ್ಮದಾ ಬಾಲು ಹಾಗೂ ತಮಿಳುನಾಡಿನ ವಿಜಯ್ ಸುಂದರ್ ಪ್ರಶಾಂತ್ ಸೆಪ್ಟೆಂಬರ್ 12ರಿಂದ 19ರವರೆಗೆ ಇಲ್ಲಿ ನಡೆಯಲಿರುವ ಜೆಜಿಐ-ಎಐಟಿಎ ಅಖಿಲ ಭಾರತ ರ್ಯಾಂಕಿಂಗ್ ಟೆನಿಸ್ ಚಾಂಪಿಯನ್ಷಿಪ್ನಲ್ಲಿ ಕ್ರಮವಾಗಿ ಮಹಿಳೆಯರ ಹಾಗೂ ಪುರುಷರ ವಿಭಾಗದಲ್ಲಿ ಅಗ್ರ ಶ್ರೇಯಾಂಕ ಪಡೆದಿದ್ದಾರೆ.
ಈ ಚಾಂಪಿಯನ್ಷಿಪ್ ಕರ್ನಾಟಕ ಲಾನ್ ಟೆನಿಸ್ ಸಂಸ್ಥೆ (ಕೆಎಸ್ಎಲ್ಟಿ) ಕೋರ್ಟ್ನಲ್ಲಿ ನಡೆಯಲಿದ್ದು, ಒಟ್ಟು 2.5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ.
ಅರ್ಹತಾ ಸುತ್ತಿನ ಪಂದ್ಯಗಳು ಸೆ.10 ಹಾಗೂ 11ರಂದು ನಡೆಯಲಿವೆ. ಈ ಚಾಂಪಿಯನ್ಷಿಪ್ನಲ್ಲಿ 400 ಮಂದಿ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಮಹಿಳಾ ಹಾಗೂ ಪುರುಷರ ವಿಭಾಗದಲ್ಲಿ ದೇಶದ ಅಗ್ರ 20 ಮಂದಿಗೆ ನೇರ ಪ್ರವೇಶ ನೀಡಲಾಗಿದೆ. 4 ಮಂದಿ ವೈಲ್ಡ್ ಕಾರ್ಡ್ ಪ್ರವೇಶ ಪಡೆದಿದ್ದಾರೆ. 8 ಮಂದಿ ಅರ್ಹತಾ ಸುತ್ತಿನಿಂದ ಗೆದ್ದು ಬರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕೆಎಸ್ಎಲ್ಟಿಎ ಜಂಟಿ ಕಾರ್ಯದರ್ಶಿ ಪಿ.ಆರ್.ರಾಮಸ್ವಾಮಿ, ಜೈನ್ ಸಮೂಹ ಸಂಸ್ಥೆಯ ಅಧ್ಯಕ್ಷ ಆರ್.ಚೆನ್ರಾಜ್ ಜೈನ್, ಟೂರ್ನಿಯ ಸಂಘಟಕ ಕಿರಣ್ ನಂದಕುಮಾರ್ ಹಾಗೂ ಟೂರ್ನಿ ನಿರ್ದೇಶಕ ಎನ್.ರಮೇಶ್ ಉಪಸ್ಥಿತರಿದ್ದರು.