ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಂಸ್ಥೆಯೊಂದಕ್ಕೆ ಎರಡನೇ ಹಂತದ ಭದ್ರಾ ಮೇಲ್ಡಂಡೆ ಕಾಮಗಾರಿಯ ಗುತ್ತಿಗೆ ನೀಡಿ ಪ್ರತಿಯಾಗಿ ತಮ್ಮ ಇಬ್ಬರು ಮಕ್ಕಳು ಮತ್ತು ಅಳಿಯ ನಡೆಸುತ್ತಿರುವ ಎರಡು ಸಂಸ್ಥೆಗಳಿಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಅವರು ಖಾಸಗಿ ದೂರು ನೀಡಿದ್ದರು.