ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆರೆ ಸಿಕ್ಕ ಚಿರತೆ ಸಾವು

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ): ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಹಿಡಿದ ಚಿರತೆಯೊಂದು ನಂತರ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಿಂಬಿ ಶೇಖರಪ್ಪ ಎಂದಿನಂತೆ ಬೆಳಿಗ್ಗೆ 8 ಗಂಟೆಗೆ ತಮ್ಮ ಜಮೀನಿಗೆ ತೆರಳಿದಾಗ ಬಯಲಿನಲ್ಲಿ ಚಿರತೆ ಮಲಗಿಕೊಂಡಿದ್ದನ್ನು ಕಂಡರು. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದಾಗ ಸ್ಥಳಕ್ಕೆ ಆಗಮಿಸಿ ಬಲೆಯನ್ನು ಬಳಸಿ ಹಿಡಿದರು. ಆದರೆ ಬಳಿಕ ಸ್ವಲ್ಪ ಸಮಯದಲ್ಲಿ ಅದು ಸಾವನ್ನಪ್ಪಿತು ಎಂದು ಗ್ರಾಮಸ್ಥರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಚಿರತೆ ಅಂದಾಜು 2 ವರ್ಷ ಪ್ರಾಯದ್ದಾಗಿದ್ದು, ದೇಹದಲ್ಲಿ ಯಾವುದೇ ರೀತಿಯ ಗಾಯಗಳು ಕಂಡುಬಂದಿಲ್ಲ. ಕನಿಷ್ಠ 15-20 ದಿನಗಳ ಕಾಲ ಆಹಾರ, ನೀರು ಸೇವಿಸದೆ ಸುಸ್ತಾಗಿ ಸಾವನ್ನಪ್ಪಿರಬಹುದು.

ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಪ್ರಾಣಿಗಳಲ್ಲಿ ಇಂತಹ ತೊಂದರೆಗಳು ಕಂಡುಬರುತ್ತವೆ. ಇದು ಶವ ಪರೀಕ್ಷೆಯ ವರದಿಯಿಂದ ತಿಳಿದುಬರುತ್ತದೆ ಎಂದು ಪಶುವೈದ್ಯಾಧಿಕಾರಿ ಜಯಪ್ಪ ತಿಳಿಸಿದರು.

ಕರಡಿಬೆಟ್ಟ ಅರಣ್ಯ ಪ್ರದೇಶದಲ್ಲಿ ಚಿರತೆ ಕಂಡುಬಂದಿದ್ದು ಈ ಪ್ರದೇಶದಲ್ಲಿ ಹೆಚ್ಚಿನ ಕಾಡುಪ್ರಾಣಿಗಳು ಇವೆ. ಇಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT