ತುಮಕೂರು: ನಗರದ ಅಗ್ನಿಶಾಮಕ ಠಾಣೆ ಮುಂಭಾಗದಿಂದ ಸಿದ್ದಗಂಗಾ ಆಯಿಲ್ ಮಿಲ್ವರೆಗೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಮೇಲುಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಮತ್ತು ವಿನಾಯಕ ಬಳಗದ ಕಾರ್ಯಕರ್ತರು ಹಾಗೂ ಸುತ್ತಲಿನ ನಿವಾಸಿಗಳು ಭಾನುವಾರ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿದರು.
ಹೆದ್ದಾರಿ 2 ಬದಿ ಬಡಾವಣೆಗಳಿವೆ. ರಸ್ತೆ ದಾಟುವ ಸಂದರ್ಭ ಅಪಘಾತ ಸಂಭವಿಸುತ್ತಿವೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಸೂಕ್ರ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಸ್ತೆ ತಡೆ ನಡೆಸಲು ಪೊಲೀಸರು ಪ್ರತಿಭಟನಾಕಾರರಿಗೆ ಅವಕಾಶ ನೀಡಲಿಲ್ಲ. ಕೆಲ ಕಾಲ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.
ಈ ಭಾಗದಲ್ಲಿ ರಸ್ತೆ ದಾಟಲು ಅನುಕೂಲವಾಗುವಂತೆ ಸೇತುವೆ ನಿರ್ಮಿಸುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಕೋರಲಾಗಿದೆ ಎಂದು ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಪ್ರತಿಭಟನೆಯಲ್ಲಿ ಮುಖಂಡರಾದ ನಾಗೇಂದ್ರ, ರಾಕೇಶ್, ಮಣಿ. ಲೋಕಮ್ಮ, ಬಾಬು ಕೃಷ್ಣಮೂರ್ತಿ ಮುಂತಾದವರು ಭಾಗವಹಿಸಿದ್ದರು.
ತಿಪಟೂರು ಬಂದ್ ಇಂದು
ತುಮಕೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅ. 1ರಂದು ಜಿಲ್ಲಾ ಮಾದಿಗ- ಛಲವಾದಿ ಸಂಘಟನೆ ವತಿಯಿಂದ ತಿಪಟೂರು ಬಂದ್ಗೆ ಕರೆ ನೀಡಲಾಗಿದೆ ಎಂದು ಬಂದಕುಂಟೆ ನಾಗರಾಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.