ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕೊ ಶಂಕರ್ ಇನ್ನೂ ಪತ್ತೆ ಇಲ್ಲ

Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡಿರುವ ಕೈದಿ `ಜೈಶಂಕರ್‌ನ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆತನ ಹುಟ್ಟೂರಾದ ತಮಿಳುನಾಡಿನ ಈಡಪ್ಪಾಡಿ ತಾಲ್ಲೂಕಿನ ಕಟ್ಟುವಾಳ್ ಕನ್ನಿಯಾಪಟ್ಟಿ ಗ್ರಾಮಕ್ಕೆ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ಅಲ್ಲದೇ, ನಗರದಲ್ಲೂ ಸಿಬ್ಬಂದಿ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈವರೆಗೆ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಬಿ.ಕೆ.ಸಿಂಗ್ `ಪ್ರಜಾವಾಣಿ'ಗೆ ತಿಳಿಸಿದರು.

ನೋಟಿಸ್: ಜೈಶಂಕರ್ ಅಲಿಯಾಸ್ ಶಂಕರ್ ಪತ್ತೆಗಾಗಿ ಪೊಲೀಸರು `ಲುಕ್‌ಔಟ್ ನೋಟಿಸ್' ಹೊರಡಿಸಿದ್ದಾರೆ. ಎಸಿಪಿ ಎಸ್.ಪಿ.ಬಾಲಾಜಿ ಸಿಂಗ್ ಅವರ ಮೊಬೈಲ್ ಸಂಖ್ಯೆ 94808 01606ಕ್ಕೆ ಸುಳಿವು ನೀಡಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಬಗ್ಗೆ ಸಾರ್ವಜನಿಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ 080 - 2574 3201, 2294 3475 ಅಥವಾ ಬೆಂಗಳೂರು ನಗರ ಆಗ್ನೇಯ ಪೊಲೀಸ್ ವಿಭಾಗದ ನಿಯಂತ್ರಣ ಕೊಠಡಿಯ 080 - 2294 3481, 2294 3482 ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬಹುದು. ಅಲ್ಲದೇ ಬೆಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 080 - 2294 3322 ಅಥವಾ ಮಡಿವಾಳ ಉಪವಿಭಾಗದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT