ಜಾಲಹಳ್ಳಿ: ಇಲ್ಲಿಗೆ ಸಮೀಪದ ಸೋಮನಮರಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಗನ್ನಾಥರಾಯ ಪಾಟೀಲ್ ಮಾತನಾಡಿ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಕಾರ್ಯಕ್ರಮ ಜಾರಿಗೆ ತಂದಿರುವುದು ಶಿಕ್ಷಣ ಇಲಾಖೆಯ ಪ್ರತಷ್ಠಿತ ಕಾರ್ಯಕ್ರಮವಾಗಿದ್ದು ಇದರಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದಾಗಿ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.
ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ರೀತಿಯ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಬೇಕೆಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ಬಸವರಾಜ ಸ್ವಾಮಿ, ಸದಸ್ಯ ಬಸವರಾಜ, ಮುಖಂಡರಾದ ಚಂದ್ರಶೇಖರ ನಾಡಗೌಡ, ಶಿವರಾಜ ಸಿದ್ದಾಪುರ, ಹನುಮನಗೌಡ ಪೋ.ಪಾ., ಎನ್. ಲಿಂಗಪ್ಪ ಹಾಗೂ ಶಾಲೆಯ ಮುಖ್ಯೋಪಧ್ಯಾಯರಾದ ವಿಠೋಬ ನಾಯಕ ಇದ್ದರು. ಹನುಮಂತ ಕಾಂತಿ, ಈರಪ್ಪ ಕಾರ್ಯಕ್ರಮ ನಿರ್ವಹಿಸಿದರು.