‘ಪ್ರತಿಕ್ರಿಯೆ ನೀಡಲು ಸಿದ್ಧವಿಲ್ಲ’ ಎಂದು ಕೊಚ್ಚಿ ತಂಡದ ಸಹ ಮಾಲೀಕ ವಿವೇಕ್ ವೇಣುಗೋಪಾಲ್ ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಹರಾಜಾಗದ ಆಟಗಾರನನ್ನು ಯಾವುದೇ ತಂಡಕ್ಕೆ ಸೇರಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಐಪಿಎಲ್ ಆಡಳಿತ ಮಂಡಳಿ ಒಪ್ಪಿಗೆ ನೀಡುವುದಕ್ಕಿಂತ ಮುನ್ನ ಈ ಟ್ವೆಂಟಿ-20 ಟೂರ್ನಿಯಲ್ಲಿ ಆಡುವ ಬಾಕಿ ಒಂಬತ್ತು ತಂಡಗಳಿಂದ ಸಮ್ಮತಿ ಸಿಗಬೇಕು. ಅಲ್ಲಿಯವರೆಗೆ ಏನನ್ನೂ ಹೇಳುವುದು ಸಾಧ್ಯವಿಲ್ಲವೆಂದು ಎಂದು ಬಿಸಿಸಿಐ ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ.