ಬಡವರು ಮತ್ತು ಕಡು ಬಡವರಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಉತ್ತಮ ಸೇವೆ ನೀಡುತ್ತಿದೆ. ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ ಶಕ್ತಿಮೀರಿ ಯತ್ನಿಸುತ್ತಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ಹೊತ್ತು ಇಲ್ಲಿಗೆ ಬರುತ್ತಾರೆ. ಆರೋಗ್ಯ ಸಚಿವರು ಶೀಘ್ರ ಇತ್ತ ಗಮನ ಹರಿಸಬೇಕು.ಪೋಷಕರು ಮತ್ತು ಮಕ್ಕಳು ಕುಳಿತುಕೊಳ್ಳಲು ಆಸನಗಳು, ಸಭಾಂಗಣ, ಪಾರ್ಕಿಂಗ್, ಉಪಾಹಾರ ಗೃಹದ ಸೌಲಭ್ಯ ಕಲ್ಪಿಸಬೇಕು.