ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರಿಗೆ ಉದ್ಯೋಗ ನೀಡಲು ಆಗ್ರಹ

Last Updated 13 ಡಿಸೆಂಬರ್ 2013, 8:37 IST
ಅಕ್ಷರ ಗಾತ್ರ

ಮಾಲೂರು: ಸ್ಥಳೀಯ ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಲಭ್ಯಗಳ ಕೊರತೆಯಿಂದ  ಬೃಹತ್ ಕೈಗಾರಿಕೆ ಸ್ಥಾಪಿಸಲು ಅನೇಕ ಉದ್ಯಮಿಗಳು ಆಸಕ್ತಿ ತೋರುತ್ತಿಲ್ಲ. ಈ ಹಿಂದೆ ಹಲವು ಬಾರಿ ಮೂಲ ಸವಲತ್ತುಗಳನ್ನು ಕಲ್ಪಿಸುವಂತೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ  ಎಂದು ಕೈಗಾರಿಕಾ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ್ ವಿಷಾದಿಸಿದರು.

ಪಟ್ಟಣದ ಹೊರವಲಯದ ನೊಸಗೆರೆ ಕೈಗಾರಿಕಾ ಪ್ರಾಂಗಣದಲ್ಲಿ ಕೈಗಾರಿಕಾ ಮಾಲೀಕರ ಸಂಘ ಹಾಗೂ ಭುವನೇಶ್ವರಿ ಕನ್ನಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ  ರಾಜ್ಯೋತ್ಸವದಲ್ಲಿ ಮಾತನಾಡಿದರು. 

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಈ ಭಾಗದ ರೈತರು ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ಜಮೀನನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಮಿಕರಿಗಾಗಿ ಇಎಸ್ಐ ಆಸ್ಪತ್ರೆ ಸ್ಥಾಪಿಸಬೇಕು. ಸುತ್ತಲಿನ ಪರಿಸರಕ್ಕೆ ಕೈಗಾರಿಕೆ ದುಷ್ಪರಿಣಾಮ ಬೀರದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಉಚಿತ­ವಾಗಿ ಸ್ಕೂಲ್ ಬ್ಯಾಗ್ ವಿತರಿಸ­ಲಾಯಿತು.  ಜಿ.ಪಂ.ಸದಸ್ಯೆ ಯಲ್ಲಮ್ಮ, ನೊಸಗೆರೆ ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ ಮುನಿರಾಜು, ಸದಸ್ಯರಾದ ಬಿ.ಎನ್.­ಮಲ್ಲಿಕಾರ್ಜುನಯ್ಯ, ಕೆ.ಎಂ.ಅಶೋಕ್ ಕುಮಾರ್, ವೆಂಕಟೇಶಪ್ಪ, ಸಿ.ಎಂ.­ನಾರಾಯಣ­ಸ್ವಾಮಿ, ಎಂ.ನಾಗರಾಜ್, ಮುಖಂಡರಾದ  ಎನ್.ವಿ.ಈಶ್ವರಯ್ಯ, ಬ್ಯಾಲಹಳ್ಳಿ ಕೃಷ್ಣಪ್ಪ, ಕರವೇ ತಾಲ್ಲೂಕು ಅಧ್ಯಕ್ಷೆ ಲತಾಬಾಯಿ, ಎಸ್.ಎಂ.­ರಾಜು, ಸವಿತಾ ನಾಗರಾಜ್, ಮಂಗಮ್ಮ, ಎಂ.ನಾಗರಾಜು, ನಾರಾಯಣ­ರೆಡ್ಡಿ, ಮುನಿರೆಡ್ಡಿ, ನಾರಾಯಣಸ್ವಾಮಿ, ಮುನಿ­ರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT