ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧೆ: ಶಂಕರ್‌ಗೆ ಪ್ರಥಮ ಬಹುಮಾನ

Last Updated 5 ಮಾರ್ಚ್ 2011, 10:05 IST
ಅಕ್ಷರ ಗಾತ್ರ

ಕುಷ್ಟಗಿ: ಇಳಕಲ್‌ನಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ‘ಜಲದೃಶ್ಯ’ ವಿಭಾಗದಲ್ಲಿ ತಾಲ್ಲೂಕಿನ ದೋಟಿಹಾಳ ಗ್ರಾಮದ ಶಂಕರ ಪತ್ತಾರ ಅವರ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ಇಳಕಲ್ ವರ್ಣ ಆರ್ಟ್ ಗ್ರೂಪ್ ಎರಡನೇ ಕಲಾ ಹಬ್ಬದ ನಿಮಿತ್ತ ಈ ಸ್ಪರ್ಧೆ ಏರ್ಪಡಿಸಿತ್ತು. ಇಳಕಲ್‌ನ ವಿಜಯಮಹಾಂತ ಸ್ವಾಮೀಜಿ ಶಂಕರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ತಾಲ್ಲೂಕಿನ ಛಾಯಾಚಿತ್ರಗ್ರಾಹಕರ ಸಂಘದ ಗೌರವ ಅಧ್ಯಕ್ಷರಾಗಿರುವ ಶಂಕರ್‌ರ ಅನೇಕ ನಿಸರ್ಗಕ್ಕೆ ಸಂಬಂಧಿಸಿದ ಚಿತ್ರಗಳಿಗೆ ಈ ಹಿಂದೆಯೂ ಪ್ರಶಸ್ತಿಗಳು ಬಂದಿವೆ.ಪ್ರಶಸ್ತಿ ಪಡೆದ ಶಂಕರ್ ಅವರನ್ನು ತಾಲ್ಲೂಕು ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT