‘ದೇವೇಗೌಡರ ಕುಟುಂಬ ರಾಜ್ಯಕ್ಕೆ ನೀಡಿರುವ ಕೊಡುಗೆ ಏನು’ ಎಂದು ಆದಿಚುಂಚನಗಿರಿ ಮಠಾಧೀಶರು ಕಾರ್ಯಕ್ರಮವೊಂದರಲ್ಲಿ ಪ್ರಶ್ನಿಸಿರುವುದಕ್ಕೆ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸ್ವಾಮೀಜಿ ನಮ್ಮ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ನಮ್ಮ ಕುಟುಂಬದ ಕೊಡುಗೆ ರಾಜ್ಯದ ಜನತೆಗೆ ಗೊತ್ತಿದೆ. ಸ್ವಾಮೀಜಿಗಳ ನಡವಳಿಕೆ ಗಮನಿಸಿದ್ದೇವೆ. ಯಾವುದೇ ಸ್ವಾಮೀಜಿಗಳಿಂದ ನಮಗೆ ಪ್ರಮಾಣಪತ್ರ ಬೇಕಿಲ್ಲ. ಕೇವಲ ರೂ. 134 ಕೋಟಿಯ ವಿಕಾಸಸೌಧ ಕಟ್ಟುತ್ತಿದ್ದಾಗ ರಾಜ್ಯದಲ್ಲಿ ಎಷ್ಟು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡರು? ನಾನು ಮುಖ್ಯಮಂತ್ರಿಯಾದಾಗ ರಾಜ್ಯದ ರೈತರ ರೂ. 2500 ಕೋಟಿ ಸಾಲ ಮನ್ನಾ ಮಾಡಿದ್ದರಿಂದ ಆತ್ಮಹತ್ಯೆ ಪ್ರಮಾಣ ಎಷ್ಟು ಕಡಿಮೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ಪಡೆದು ಸ್ವಾಮೀಜಿ ಮಾತನಾಡಲಿ ಎಂದು ಅವರು ಸವಾಲು ಹಾಕಿದರು.