ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾರ್ಥಿಗಳು, ನಿಷ್ಪ್ರಯೋಜಕರು

Last Updated 8 ಜನವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಐಎಎನ್‌ಎಸ್): `ಸ್ವಾರ್ಥಿ ಜನರು, ನಿಷ್ಪ್ರಯೋಜಕರ ಗುಂಪು~ ಎಂದು ಅಣ್ಣಾ ತಂಡದ ಸದಸ್ಯರಾದ ಮನೀಶ್ ಸಿಸೊಡಿಯಾ, ಅರವಿಂದ ಕೇಜ್ರಿವಾಲ್, ಕಿರಣ್ ಬೇಡಿ ಅವರ ವಿರುದ್ಧ ಶಿವಸೇನೆ ಮುಖ್ಯಸ್ಥ ಬಾಳ ಠಾಕ್ರೆ ಅವರು ಭಾನುವಾರ ಟೀಕಿಸಿದ್ದಾರೆ.

ಪಕ್ಷದ ಮುಖವಾಣಿ `ಸಾಮ್ನಾ~ಕ್ಕೆ ನೀಡಿರುವ ಸಂದರ್ಶನದಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ವಿರುದ್ಧ ಠಾಕ್ರೆ ವಾಗ್ದಾಳಿ ಮಾಡಿದ್ದಾರೆ.

`ಕ್ಷುಲ್ಲಕ ಕಾರಣಗಳಿಗಾಗಿ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಲವಂತವಾಗಿ ಇತರರೂ ಇದನ್ನು  ಮಾಡುವಂತೆ ಒತ್ತಾಯಿಸುತ್ತಾರೆ. ಇದು `ರಾಜಕೀಯ ಬಲಾತ್ಕಾರ~ವಲ್ಲದೆ ಬೇರೇನಲ್ಲ~ ಎಂದು ಅಭಿಪ್ರಾಯಪಟ್ಟಿದ್ದಾರೆ. `ಸಾಕಷ್ಟು ಪ್ರಚಾರ ಗಿಟ್ಟಿಸಿದ್ದ ಲೋಕಪಾಲ ಮಸೂದೆ ಏನಾಯಿತು? ನಿಜವಾಗಿಯೂ ದೇಶಕ್ಕೆ ಅದರ ಅಗತ್ಯ ಇದೆಯೇ, ಇದರ ಹಿಂದೆ ಬೇರೆ ಏನಾದರೂ ಉದ್ದೇಶವಿದೆಯೆ?~ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT