ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಬೇಡ್ಕರ್ ಕಾಲೋನಿಯ ಕೊಳೆಗೇರಿ ಪ್ರದೇಶ ಗಳಿಗೆ ಹಕ್ಕು ಪತ್ರ ನೀಡಿ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾ ಯಿಸಿದೆ.
ದಲಿತರ ಸಮಗ್ರ ಅಭಿವೃದ್ಧಿಗಾಗಿ ಏಕಗವಾಕ್ಷಿ ಯೋಜನೆ, ಬ್ಯಾಂಕ್ಗಳಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ನಿಗಮದಿಂದ ದಲಿತರು ಪಡೆದ ಸಾಲವನ್ನು ಮನ್ನಾ ಮಾಡುವುದು, ದಲಿತ ಕೇರಿಗಳು ಮತ್ತು ಅಂಬೇಡ್ಕರ್ ಕಾಲೋನಿ ಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ತಿಳಿಸಿದ್ದಾರೆ.