ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಣದ ರೂವಾರಿ ಹೆಸರನ್ನು ಬಹಿರಂಗ ಪಡಿಸಲಿ: ಬಿಜೆಪಿ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): `ವೋಟಿಗಾಗಿ ನೋಟು~ ಹಗರಣದ ಹಿಂದೆ ಇರುವ ವ್ಯಕ್ತಿಗಳ ಹೆಸರನ್ನು  ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರು ಬಹಿರಂಗಪಡಿಸಬೇಕು ಎಂದು ಬಿಜೆಪಿ ಹೇಳಿದೆ.

`ಈ ಹಗರಣದಲ್ಲಿ ಯಾರ ಹೆಸರು ಬಂದರೂ, ಹಗರಣದ ಪ್ರಯೋಜನ ಪಡೆದಿರುವುದು ಯುಪಿಎ ಸರ್ಕಾರ~ ಎಂದು ಬಿಜೆಪಿ ಮುಖಂಡ ರಾಜೀವ್ ಪ್ರತಾಪ್ ರೂಡಿ ಸುದ್ದಿಗಾರರಿಗೆ  ತಿಳಿಸಿದರು.

`ಹಗರಣದಿಂದ ಪ್ರಯೋಜನ ಪಡೆದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಈ ಹಗರಣದ ಸಂಬಂಧ ಸ್ಪಷ್ಟನೆ ನೀಡಲು ಮತ್ತು ರೂವಾರಿಗಳ ಹೆಸರನ್ನು ಬಹಿರಂಗ ಪಡಿಸಲು ಅಮರ್ ಸಿಂಗ್ ಅವರಿಗೆ ಇದು ಸೂಕ್ತ ಸಮಯ~ ಎಂದು  ರೂಡಿ ಹೇಳಿದರು.

ಲೋಕಸಭೆಯಲ್ಲಿ 2008ರಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದಿದ್ದ  `ಓಟಿಗಾಗಿ ನೋಟು~ ಹಗರಣದ ಲ್ಲಿ ಭಾಗಿಯಾದ ಆರೋಪದಲ್ಲಿ ಅಮರ್ ಸಿಂಗ್ ಮತ್ತು ಇಬ್ಬರು ಬಿಜೆಪಿ ಸಂಸತ್ ಸದಸ್ಯರನ್ನು ಮಂಗಳವಾರ ಬಂಧಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಈ ಮಧ್ಯೆ, ಹಗರಣದಲ್ಲಿ ಬಳಕೆಯಾದ ಹಣದ ಮೂಲ ವಿಚಾರ ಅತ್ಯಂತ ಪ್ರಮುಖವಾದುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.

`ಅಷ್ಟೊಂದು ಹಣ ಎಲ್ಲಿಂದ ಬಂತು, ಯಾರು ಕೊಟ್ಟರು ಎಂಬ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿಲ್ಲ. ಇವುಗಳು ಅತ್ಯಂತ ಪ್ರಮುಖ ವಿಚಾರವಾಗಿದ್ದು, ಸಿಬಿಐ ಈ ಬಗ್ಗೆ ಗಮನ ಹರಿಸಬೇಕು~ ಎಂದು ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT