ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ದುರುಪಯೋಗ: ಸಚಿನ್ ಮೀಗ ವಿರುದ್ಧ ದೂರು

Last Updated 13 ಜನವರಿ 2012, 5:55 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಳೆದ ಕೆಲವು ತಿಂಗಳ ಹಿಂದೆ ಶೃಂಗೇರಿ ಪಟ್ಟಣದಲ್ಲಿ ನಡೆದ ಗಲಾಟೆಯೊಂದರಲ್ಲಿ ಗಾಯಗೊಂಡಿದ್ದ ಕಾಂಗ್ರೆಸ್ ಮುಖಂಡರೊಬ್ಬರ ಚಿಕಿತ್ಸೆಗೆ ಹಣ ಬೇಕೆಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಬಳಿ ಪಡೆದಿರುವ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಶೃಂಗೇರಿ ಯುವ ಕಾಂಗ್ರೆಸ್ ಮುಖಂಡರು ದೂರು ನೀಡಿದರು.

ಗುರುವಾರ ಬೆಳಿಗ್ಗೆ ನಗರದಲ್ಲಿ ವಾಸ್ತವ್ಯ ಹೂಡಿದ್ದ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿದ ಶೃಂಗೇರಿ ಯುವ ಕಾಂಗ್ರೆಸ್ ಮುಖಂಡರಾದ ನಿಖಿಲ್, ನಟರಾಜ್, ಸೌಭಾಗ್ಯ ಸೇರಿದಂತೆ ಹಲವು ಸ್ಥಳೀಯರು, ಜಿಲ್ಲೆಯ ಕಾಂಗ್ರೆಸ್ ಯುವ ಮುಖಂ ರೊಬ್ಬರು ಗಾಯಾಳು ಹೆಸರಿನಲ್ಲಿ ಪಡೆದಿರುವ ಹಣವನ್ನು ಪ್ರಮೋದ್‌ಗೆ ನೀಡಿಲ್ಲ ಎಂದು ದೂರು ನೀಡಿದ್ದಾರೆ.

ಬಜರಂಗದಳ ಮತ್ತು ಯುವ ಕಾಂಗ್ರೆಸ್ ನಡುವೆ ನಡೆದ ಗಲಾಯಲ್ಲಿ ಪಕ್ಷದ ಕಾರ್ಯ ಕರ್ತ ಪ್ರಮೋದ್ ಕಣ್ಣಿಗೆ ಪೆಟ್ಟು ಬಿದ್ದಿತ್ತು. ಯುವ ಕಾಂಗ್ರೆಸ್ ಜಿಲ್ಲಾ ಘಟಕ ಮಾಜಿ ಅಧ್ಯಕ್ಷ ಸಚೀನ್ ಮೀಗಾ ಚಿಕಿತ್ಸೆಗಾಗಿ ಪರಮೇಶ್ವರ್ ಬಳಿ ಹಣ ಪಡೆದು, ಚಿಕಿತ್ಸೆಗೆ ನೀಡದೆ ಸತಾಯಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಶೃಂಗೇರಿ ಕಾಂಗ್ರೆಸ್ ಮುಖಂಡರ ಅಹವಾಲು ಆಲಿಸಿದ ಪರಮೇಶ್, ಈ ಬಗ್ಗೆ ಸಚೀನ್‌ಮೀಗಾ ಜತೆ ಚರ್ಚಿಸಿ, ಗಾಯಾಳು ಚಿಕಿತ್ಸೆಗೆ ಹಣ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಪರಿಸ್ಥಿತಿ ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT