ಬೆಂಗಳೂರು: ಔಷಧ ನಿಯಂತ್ರಕನೆಂದು (ಡ್ರಗ್ ಕಂಟ್ರೋಲರ್) ಹೇಳಿಕೊಂಡು ಔಷಧ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಚಿಕ್ಕಪೇಟೆಯ ಅಂಜಯ್ಯ ಶೆಟ್ಟಿ (53) ಎಂಬಾತನನ್ನು ನಂದಿನಿಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಅಂಜಯ್ಯ ಔಷಧ ನಿಯಂತ್ರಕರ ಸೋಗಿನಲ್ಲಿ ನಂದಿನಿಲೇಔಟ್ ನಾಲ್ಕನೇ ಬ್ಲಾಕ್ನ ವಿ.ಆರ್.ಮೆಡಿಕಲ್ ಸ್ಟೋರ್ನ ಮಾಲೀಕ ಲೋಹಿತ್ ಎಂಬುವರಿಂದ ಹಣ ಪಡೆದು ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಾನವ ಹಕ್ಕುಗಳ ಆಯೋಗದ ಬೆಂಗಳೂರು ಜಿಲ್ಲಾ ವರದಿಗಾರನೆಂದು ಹೇಳಿಕೊಂಡು ಅಧಿಕಾರಿಗಳ ಹೆಸರು ಬಳಸಿಕೊಂಡು ಬೆದರಿಸಿ ಹಣ ಪಡೆದು ವಂಚಿಸಿದ್ದಾನೆ. ಉತ್ತರ ವಿಭಾಗದ ಡಿಸಿಪಿ ಎಚ್.ಎಸ್.ರೇವಣ್ಣ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಚಂದ್ರು ಮತ್ತು ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸಿದೆ.