ಬೆಂಗಳೂರು: ಬೆಂಗಳೂರಿನ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾಗಿದೆ ಎಂಬ ಆರೋಪ ಈಗ ಹೈಕೋರ್ಟ್ ಅಂಗಳಕ್ಕೆ ಬಂದಿದೆ. ನಗರದ ರಸ್ತೆಗಳ ದುರವಸ್ಥೆ ಕುರಿತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರು ಹೈಕೋರ್ಟ್ನಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ ಮತ್ತು ಬಿ. ಮನೋಹರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಹಾಗೂ ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಅವರಿಗೆ ತುರ್ತು ನೋಟಿಸ್ ಜಾರಿಗೆ ಬುಧವಾರ ಆದೇಶಿಸಿದೆ.
`ನಗರದ ರಸ್ತೆಗಳ ದುರವಸ್ಥೆ ಕುರಿತು ಮಾಧ್ಯಮಗಳಲ್ಲಿ ಕಳೆದ ಕೆಲವು ತಿಂಗಳಿನಿಂದ ವರದಿಗಳು ಪ್ರಕಟವಾಗುತ್ತಿವೆ. ಕೆಟ್ಟಿರುವ ರಸ್ತೆಗಳ ಕಾರಣ ಅಪಘಾತಗಳೂ ಸಂಭವಿಸಿವೆ. ನಗರದ ರಸ್ತೆಗಳು ಸರಿಯಾಗಿಲ್ಲ ಎಂದು 2004ರಲ್ಲಿ ಸಾವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.