ತಾಲ್ಲೂಕು ವೈದ್ಯಾಧಿಕಾರಿ ಡಾ.ಎಲ್. ಹನುಮಾನಾಯ್ಕ ಮಾತನಾಡಿ, ಶಿಬಿರದಲ್ಲಿ ಮಕ್ಕಳ ತಜ್ಞರಾದ ಡಾ.ಬಂಡಿ ರಮ್ಯಾ, ಡಾ.ಮನೋಹರ ಶೆಟ್ಟಿ ಹಾಗೂ ಡಾ.ಅಜೀಜ್, ವೈದ್ಯಾಧಿಕಾರಿಗಳಾದ ಡಾ.ಪ್ರಶಾಂತ್, ಡಾ.ಕಾಂತೇಶ್ ಮಕ್ಕಳ ತಪಾಸಣೆ ನಡೆಸುತ್ತಿದ್ದಾರೆ. ಅಪೌಷ್ಟಿಕ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲೇ ಉತ್ತಮ ಚಿಕಿತ್ಸೆ ಸಿಕ್ಕರೆ ಅವರ ಭವಿಷ್ಯದಲ್ಲಿ ಆರೋಗ್ಯವಂತರಾಗಿರುತ್ತಾರೆ.