ಆರೋಪಿಗಳನ್ನು ಬಂಧಿಸಿದ ಪೊಲೀಸರು ರಾಜಕೀಯ ಒತ್ತಡದಿಂದಾಗಿ ಕೇವಲ ಒಂದು ಗಂಟೆಯಲ್ಲಿ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಂಪಿಗೆಹಳ್ಳಿ ಉಪ ವಿಭಾಗದ ಎಸಿಪಿ ರಾಮಚಂದ್ರಪ್ಪ, ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಸದಸ್ಯ ದಾನೇಗೌಡ, ಬ್ಯಾಟರಾಯನಪುರ ಹಾಗೂ ಕೆ.ಆರ್. ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಆಂಜಿನಪ್ಪ ಮತ್ತಿತರಿದ್ದರು.