ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ವಲಯ ವೃದ್ಧಿಗೆ ತುರ್ತು ಗಮನ ಅಗತ್ಯ

Last Updated 7 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಜಾಗತಿಕ ತಾಪಮಾನ ತೀವ್ರವಾಗಿ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಹಸಿರು ವಲಯ ವೃದ್ಧಿಗೆ ತುರ್ತು ಗಮನ ನೀಡಬೇಕಿದೆ~ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಗಳ ವಿಭಾಗದ ವಿಜ್ಞಾನಿ ಡಾ.ಹರೀಶ್ ಆರ್. ಭಟ್ ಹೇಳಿದರು.

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ಸಂಗ್ರಹಾಲಯವು ವಿಶ್ವ ಪರಿಸರ ದಿನದ ಪ್ರಯುಕ್ತ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಭವಿಷ್ಯಕ್ಕಾಗಿ ಉತ್ತಮ ಪರಿಸರ~ ಎಂಬ ವಿಷಯ ಕುರಿತು ಅವರು ಮಾತನಾಡಿದರು.

`ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕಿದೆ. ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ಬೆಳೆಸಬೇಕು. ಅದರಲ್ಲೂ ವಿದ್ಯಾರ್ಥಿಗಳು ಹಾಗೂ ಯುವಜನತೆ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು~ ಎಂದರು.

`ಸಸಿ ನೆಟ್ಟ ಬಳಿಕ ಮೂರು ವರ್ಷ ಕಾಲ ಅದನ್ನು ಪೋಷಿಸಿದರೆ ಆನಂತರ ಹತ್ತಾರು ವರ್ಷ ಯಾವುದೇ ನಿರ್ವಹಣೆಯಿಲ್ಲದಿದ್ದರೂ ಮರ ಉತ್ತಮವಾಗಿ ಬೆಳೆಯುತ್ತವೆ. ಜತೆಗೆ ಫಲವನ್ನೂ ನೀಡುತ್ತದೆ. ಪ್ರಾಣಿ, ಪಕ್ಷಿಗಳಿಗೆ ಆಶ್ರಯವೂ ದೊರೆತಂತಾಗುತ್ತದೆ~ ಎಂದು ಹೇಳಿದರು.

`ಕೆಲ ದಶಕಗಳ ಹಿಂದೆ ನೀರಿನ ಬಾಟಲಿ ಹಿಡಿದು ಹೋಗುವವರನ್ನು ಅಪಹಾಸ್ಯ ಮಾಡುವಂತಾಗಿತ್ತು. ಆದರೆ ಇಂದು ಎಲ್ಲರೂ ಬಾಟಲಿ ನೀರು ಬಳಸುವ ಕಾಲ ಬಂದಿದೆ. ಅದೇ ರೀತಿ ಭವಿಷ್ಯದಲ್ಲಿ ಆರೋಗ್ಯವಂತ ವ್ಯಕ್ತಿಗಳು ಆಮ್ಲಜನಕದ ಸಿಲಿಂಡರ್‌ಗಳನ್ನು ಬಳಸುವ ಸ್ಥಿತಿ ಬರಬಾರದು. ಅದಕ್ಕಾಗಿ ಇಂದಿನಿಂದಲೇ ಗಿಡ- ಮರ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು~ ಎಂದರು.

ಬಳಿಕ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT