ಪಕ್ಷದ ಸಿದ್ಧಾಂತ ಒಪ್ಪುವವರಿಗೆ ನಮ್ಮ ಜೊತೆ ಇರುವಂತೆ ಹೇಳುತ್ತೇವೆ. ಬಿಜೆಪಿ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮಾಡಿದ ಒಳ್ಳೆಯ ಕೆಲಸಗಳ ಕುರಿತು ಜನರಿಗೆ ಮನವರಿಕೆ ಮಾಡುತ್ತೇವೆ' ಎಂದರು.ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗರು ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಇದರ ಬದಲು, ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜ್ಯ ಸಂಕಷ್ಟದಲ್ಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಿ ಎಂದು ಸವಾಲೆಸೆದರು.
ಬಹುಬ್ರ್ಯಾಂಡ್ ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ವಿಚಾರದಲ್ಲಿ ಯುಪಿಎ ಸರ್ಕಾರ ತಾಂತ್ರಿಕವಾಗಿ ಮಾತ್ರ ಗೆಲುವು ಸಾಧಿಸಿದೆ. ಎಫ್ಡಿಐ ವಿಚಾರವನ್ನು ಬಿಜೆಪಿ ಜನತಾ ನ್ಯಾಯಾಲಯಕ್ಕೆ ಕೊಂಡೊಯ್ಯಲಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಬಿಜೆಪಿ ಪ್ರಚಾರ ನಡೆಸಲಿದೆ ಎಂದು ಹೇಳಿದರು.