ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಸುಕಿನ 3.30ರ ಸುಮಾರಿನಲ್ಲಿ ಕ್ಯಾಂಟರ್ ಹಾಗೂ ಕ್ವಾಲೀಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.
ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಕಡೆಯಿಂದ ಬರುತ್ತಿದ್ದ ಕ್ವಾಲೀಸ್ ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಕ್ಯಾಂಟರ್ಗೆ ಡಿಕ್ಕಿ ಹೊಡೆಯಿತು. ಇದರಲ್ಲಿದ್ದ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಅನಿತಾ, ಪದ್ಮಾವತಿ ಹಾಗೂ ಗೋವಿಂದ ಎಂಬುವರು ಸಾವನ್ನಪ್ಪಿದರು. ಇತರೆ 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.