ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳಿಂದ ಯಡಿಯೂರಪ್ಪ ಜನ್ಮದಿನ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 70ನೇ ಹುಟ್ಟುಹಬ್ಬವನ್ನು ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳು ಸೇರಿ ಇದೇ 27ರಂದು  ನಗರದಲ್ಲಿ ಆಚರಿಸಲು ನಿರ್ಧರಿಸಿವೆ.

ಸಂಸದ ಪಿ.ಸಿ.ಮೋಹನ್, ಎಂ.ಡಿ.ಲಕ್ಷ್ಮೀನಾರಾಯಣ ಸೇರಿದಂತೆ ಇತರರು ಬುಧವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಪಕ್ಷಾತೀತವಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ. ರೈಲ್ವೆ ನಿಲ್ದಾಣ ಸಮೀಪ ದ ಬೆಲ್ ಕನ್ವೆನ್ಷನ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪಿ.ಸಿ. ಮೋಹನ್ `ಪ್ರಜಾವಾಣಿ~ಗೆ ತಿಳಿಸಿದರು.

ಹಿಂದುಳಿದ ವರ್ಗಗಳ ಸಲುವಾಗಿ ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಿದ್ದು, ಆ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸುತ್ತಿರುವುದಾಗಿ ವಿವರಿಸಿದರು. ಅವರ ಬೆಂಬಲಿಗರು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಲು ಈ ಮುಂಚೆ ನಿರ್ಧರಿಸಿದ್ದರು. ಆದರೆ, ಕೆಲವರ ಅಪಸ್ವರದಿಂದಾಗಿ ಸರಳವಾಗಿ ಆಚರಿಸಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT