ಗೌರಿಬಿದನೂರು: ಸ್ತ್ರೀಶಕ್ತಿ ಸಂಘಗಳಿಗೆ ಸರ್ಕಾರ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದ್ದು, ಸದಸ್ಯಯರು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಸಲಹೆ ನೀಡಿದರು.
ತಾಲ್ಲೂಕಿನ ಹಿರೇಬಿದನೂರು ಗ್ರಾಮದಲ್ಲಿ ರೂ.3 ಲಕ್ಷ ವೆಚ್ಚದ ಸ್ತ್ರೀಶಕ್ತಿ ಭವನಕ್ಕೆ ಶನಿವಾರ ಚಾಲನೆ ನೀಡಿದ ಅವರು, `ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಸ್ತ್ರೀಶಕ್ತಿ ಸಂಘಗಳು ಬೆಳೆಯಬೇಕು. ಆರ್ಥಿಕವಾಗಿ ಸ್ವಾವಲಂಬನೆ ಗಳಿಸಬೇಕು~ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ರಜನಿ ವೇಣುಗೋಪಾಲರೆಡ್ಡಿ ಮಾತನಾಡಿ, `ಹಿರೇಬಿದನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಸರ್ಕಾರದ ಅನುದಾನದಿಂದ ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಮಾದರಿ ಕ್ಷೇತ್ರವನ್ನಾಗಿಸುವ ಗುರಿಯಿದೆ~ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ್ರೆಡ್ಡಿ, ವೇಣುಗೋಪಾಲರೆಡ್ಡಿ, ಉಗ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.