ಫಲಿತಾಂಶ ಘೋಷಣೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಬಿಷ್ಣೋಯ್ ಅವರು, `ತಮ್ಮ ಪ್ರತಿಸ್ಪರ್ಧಿಗಳಿಂದ 32ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿರುವ ಈ ಗೆಲುವು ನನ್ನ ತಂದೆಗೆ ಹಾಗೂ ಬಿಜೆಪಿ, ಹರ್ಯಾಣ ಜನಹಿತ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ~ ಎಂದರು.
`ಸಂಸತ್ತಿನಲ್ಲಿ ಜನಲೋಕಪಾಲ ಮಸೂದೆಯನ್ನು ಬೆಂಬಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅಣ್ಣಾ ತಂಡವು ಹಿಸ್ಸಾರ್ ನಲ್ಲಿ ಕಾಂಗ್ರೆಸ್ ವಿರೋಧಿ ಅಭಿಯಾನವನ್ನು ಕೈಗೊಂಡಿತ್ತು. ಜನರು ನನಗೆ ಮತ ನೀಡಲು ತೀರ್ಮಾನಿಸಿದರು~ ಎಂದು ಅವರು ನುಡಿದರು.