ನಗರದ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನದಲ್ಲಿ ಗುರುವಾರ ನಡೆದ ‘ವಿಜಯ ದಿವಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಹಳಷ್ಟು ಸಾರಿ ಯೋಧರ ಬಲಿದಾನವನ್ನು ನಿರ್ಲಕ್ಷಿಸಲಾಗುತ್ತದೆ. ಅವರನ್ನೇ ನಂಬಿದ ಕುಟುಂಬದವರ ಬದುಕು ತೀರ ಕಷ್ಟದಾಯಕವಾಗುತ್ತದೆ. ಇಂತಹವರಿಗೆ ಸಹಾಯ ಮಾಡಲು ಮುಂದೆ ಬರುವ ದಾನಿಗಳು ಹಾಗೂ ಯೋಧರ ಕುಟುಂಬದ ನಡುವೆ ಫ್ಲ್ಯಾಗ್ಸ್ ಆಫ್ ಆನರ್ ಸಂಘಟನೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.