ನವದೆಹಲಿ, (ಪಿಟಿಐ): ಸಂಸತ್ ಭವನದ ಬಳಿ ಗುರುವಾರ ಆತ್ಮಾಹುತಿಗೆ ಯತ್ನಿಸಿ ತೀವ್ರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ, ಹುತಾತ್ಮ ಯೋಧ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಚಿಕ್ಕಪ್ಪ ಕೆ. ಮೋಹನನ್ (56) ಅವರು, ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆಂದು ಪೊಲೀಸರು ಶನಿವಾರ ಇಲ್ಲಿ ತಿಳಿಸಿದ್ದಾರೆ.
ಇಲ್ಲಿನ ರಾಮಮನೋಹರ ಲೋಹಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಹನನ್ ಅವರಿಗೆ ಶೇ 95ರಷ್ಟು ಸುಟ್ಟ ಗಾಯಗಳಾಗಿದ್ದವು. ಅವರು ಶುಕ್ರವಾರ ರಾತ್ರಿ 11ಗಂಟೆ 55 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.