ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ವಿದ್ಯುತ್: ಪರಿಶೀಲನೆ

Last Updated 18 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಚಾಮರಾಜನಗರ: `ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಈಗಾಗಲೇ, ಕೇಂದ್ರ ತನ್ನ ಪಾಲಿನ ವಿದ್ಯುತ್ ಪೂರೈಸಿದೆ. ಹೆಚ್ಚುವರಿಯಾಗಿ ವಿದ್ಯುತ್ ಸರಬರಾಜು ಮಾಡುವಂತೆ ರಾಜ್ಯ ಸರ್ಕಾರ ಬೇಡಿಕೆ ಸಲ್ಲಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ~ ಎಂದು ಕೇಂದ್ರ ಇಂಧನ ಮತ್ತು ಕಂಪೆನಿ ವ್ಯವಹಾರ ಸಚಿವ ಎಂ. ವೀರಪ್ಪ ಮೊಯಿಲಿ ತಿಳಿಸಿದರು.

ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಗ್ರಂಥಾಲಯ ಕಟ್ಟಡದ ಉದ್ಘಾಟನೆಗೆ ಶನಿವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, `ದೇಶದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವ 2 ಕೋಟಿ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ.
 
ಹೀಗಾಗಿ, ಗ್ರಾಮೀಣ ಪ್ರದೇಶದಲ್ಲಿ ಜಲ ವಿದ್ಯುತ್, ಥರ್ಮಲ್ ಹಾಗೂ ಸೌರಶಕ್ತಿ ಬಳಸಿಕೊಂಡು 1 ಮೆಗಾವಾಟ್ ಸಾಮರ್ಥ್ಯದ ಉತ್ಪಾದನಾ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರಥಮ ಹಂತದಲ್ಲಿ ದೇಶದ 1,001 ಗ್ರಾಮಗಳಲ್ಲಿ ಈ ಮಾದರಿಯ ಘಟಕಗಳನ್ನು ಸ್ಥಾಪಿಸಲಾಗುವುದು~ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT