ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಸಂಚಾರ ಮುಕ್ತ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಸತತವಾಗಿ ಬೀಳುತ್ತಿರುವ ಹಿಮ ಮತ್ತು ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸಾರ್ವಜನಿಕ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು.

ಇದರಿಂದ ಕಳೆದ ಮೂರು ದಿನಗಳಿಂದ ರಸ್ತೆ ಬದಿಯಲ್ಲಿಯೇ ನಿಂತಿದ್ದ ನೂರಾರು ವಾಹನಗಳಿಗೆ ಪ್ರಯಾಣ ಬೆಳೆಸಲು ಅವಕಾಶ ಕಲ್ಪಿಸಲಾಯಿತು.

 `ರಸ್ತೆ ಬಂದ್ ಆಗಿದ್ದರಿಂದ, 90 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸೇಬು ತುಂಬಿಸಿಕೊಂಡಿದ್ದ ಲಾರಿಗಳು ರಸ್ತೆ ಬದಿ ನಿಂತಿದ್ದವು. ಇದರಿಂದಾಗಿ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಸೇಬು ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಯಿತು~ ಎಂದು ಅವರು ಹೇಳಿದ್ದಾರೆ. 294 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಗುರುವಾರದಿಂದ ಮುಚ್ಚಿದ್ದರಿಂದ ವಿವಿಧ ಕಡೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ವಾಹನಗಳು ಚಲಿಸಲಾಗದೆ ನಿಂತಲ್ಲೇ ನಿಲ್ಲುವಂತಾಗಿತ್ತು.

ವಾಯುಪಡೆ ಕಾರ್ಯಾಚರಣೆ: ಕೆಟ್ಟ ಹವಾಮಾನದಿಂದ ಇಲ್ಲಿ ಸಿಕ್ಕಿಹಾಕಿಕೊಂಡಿದ್ದ 1,377 ಪ್ರವಾಸಿಗರನ್ನು ವಾಯುಪಡೆ ಶನಿವಾರ ವಿಶೇಷ ವಿಮಾನದಲ್ಲಿ ಜಮ್ಮು ಹಾಗೂ ಇತರ ಸ್ಥಳಗಳಿಗೆ ಕರೆದೊಯ್ಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT