ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ರಿ: ನಕ್ಸಲರು ಮತ್ತೆ ಪ್ರತ್ಯಕ್ಷ

Last Updated 13 ಜನವರಿ 2012, 19:25 IST
ಅಕ್ಷರ ಗಾತ್ರ

ಹೆಬ್ರಿ: ಕಬ್ಬಿನಾಲೆಯ ಸದಾಶಿವ ಗೌಡ ಅವರ ಹತ್ಯೆ ಬಳಿಕ ಪಶ್ಚಿಮ ಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ನಿರಂತರ ಚಟುವಟಿಕೆಯಲ್ಲಿರುವ ನಕ್ಸಲರು ಗುರುವಾರ ತಡರಾತ್ರಿ ಮತ್ತೆ ಹೆಬ್ರಿ ಠಾಣಾ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಅಜ್ಜೊಳ್ಳಿ ಮತ್ತು ಗ್ರಾಮದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

`ಶಸ್ತ್ರಸಜ್ಜಿತ ನಕ್ಸಲರ ತಂಡ ಗ್ರಾಮಸ್ಥರಿಂದ ಅಡುಗೆ ಸಾಮಾನು ಪಡೆಯಿತು.  ಈ ಬಗ್ಗೆ ಯಾರಿಗೂ ಮಾಹಿತಿ ನೀಡದಂತೆ ಗ್ರಾಮಸ್ಥರಿಗೆ ಬೆದರಿಕೆ ಕೂಡ ಹಾಕಿದೆ. ತಂಡದಲ್ಲಿ ಏಳು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದರು~ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ವಿ.ವೆಂಕಟೇಶಪ್ಪ, ಕಾರ್ಕಳ ಡಿವೈಎಸ್‌ಪಿ ಸಂತೋಷ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಹೆಬ್ರಿಯಲ್ಲಿ ಮೊಕ್ಕಾಂ ಹೂಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT