ಶಿವಮೊಗ್ಗ: ಕಿರುತೆರೆ ನಟಿ ಹೇಮಶ್ರೀ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ತಿಳಿಸಿದರು.
ಈ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇಡೀ ಪ್ರಕರಣದ ಬಗ್ಗೆ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸುವಂತೆ ಮೂರು ದಿನಗಳ ಹಿಂದೆಯೇ ಬೆಂಗಳೂರಿನ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.