ಬೆಂಗಳೂರು (ಪಿಟಿಐ): ಮಾರ್ಚ್ 3ರಂದು ರಾಜ್ಯಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಟಿ ಹೇಮಾಮಾಲಿನಿ ಅವರು ಸೋಮವಾರ ತಮ್ಮ ನಾಮ ಪತ್ರ ಸಲ್ಲಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಎಮ್.ರಾಜಶೇಖರ್ ಮೂರ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ. ವಿಧಾನ ಸಭೆಯಲ್ಲಿ ಬಿಜೆಪಿಯ ಶಾಸಕರ ಸಂಖ್ಯೆ ಹೆಚ್ಚಿರುವುದರಿಂದ ಈ ಚುನಾವಣೆಯಲ್ಲಿ ಹೇಮಾಮಾಲಿನಿ ಅವರು ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.