ಬೆಂಗಳೂರು: ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ದಿಲೀಪ್ ಬಾಬಾಸಾಹೇಬ್ ಭೋಸಲೆ ಅವರು ರಾಜ್ಯ ಹೈಕೋರ್ಟ್ಗೆ ವರ್ಗಾವಣೆಗೊಂಡಿದ್ದಾರೆ. ಇವರು ಶುಕ್ರವಾರ (ಜ. 6) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದರಿಂದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 39ಕ್ಕೆ ಏರಲಿದೆ. ಮಹಾರಾಷ್ಟ್ರ ಮೂಲದ ಭೋಸಲೆ ಅವರು, ಅಲ್ಲಿಯ ಮಾಜಿ ಮುಖ್ಯಮಂತ್ರಿ ಬಾಬಾಸಾಹೇಬ್ ಭೋಸಲೆ ಅವರ ಪುತ್ರರು.