`ಇದು ಶುದ್ಧ ವೈಯಕ್ತಿಕ ಕಾರ್ಯಕ್ರಮ, ಇದರಲ್ಲಿ ರಾಜಕೀಯ ಇಲ್ಲ. ನಮ್ಮ ಕುಟುಂಬದಲ್ಲಿ ಮದುವೆಯ ನಂತರ ಬೀಗರ ಔತಣ ಕಾರ್ಯಕ್ರಮ ಆಯೋಜಿಸುವುದು ಸಂಪ್ರದಾಯ. ಇದಕ್ಕೂ ಚುನಾವಣಾ ನೀತಿ ಸಂಹಿತೆಗೂ ಸಂಬಂಧ ಇಲ್ಲ. ಔತಣ ಆಯೋಜಿಸಲು ಅನುಮತಿ ನೀಡಬೇಕು' ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ರಾಜ್ಯ ಚುನಾವಣಾ ಆಯೋಕ್ತರು ಮತ್ತು ಹಾಸನ ಜಿಲ್ಲಾಧಿಕಾರಿಯವರಿಗೆ ನೋಟಿಸ್ ಜಾರಿಗೆ ಬುಧವಾರ ಆದೇಶ ನೀಡಿದ್ದಾರೆ. ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.