ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: ನಾಳೆ ರೆಡ್ಡಿ ಜಾಮೀನು ವಿಚಾರಣೆ

Last Updated 7 ಸೆಪ್ಟೆಂಬರ್ 2011, 9:55 IST
ಅಕ್ಷರ ಗಾತ್ರ

  ಹೈದರಾಬಾದ್, (ಐಎಎನ್ಎಸ್): ಕರ್ನಾಟಕದ ಬಂಧಿತ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿದೆ.

ಈ ನ್ಯಾಯಾಲಯ ಈ ಇಬ್ಬರು ಬಂಧಿತರ ಬಂಧನ ಅವಧಿಯ ವಿಸ್ತರಣೆಯನ್ನು ಕೋರಿರುವ ಸಿಬಿಐ ಅರ್ಜಿ ವಿಚಾರಣೆಯನ್ನೂ ಗುರುವಾರಕ್ಕೆ ಮುಂದೂಡಿದೆ.

ಆಂಧ್ರ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಓಬಳಾಪುರಂ ಕಂಪೆನಿಯ ಮಾಲಿಕ ಜನಾರ್ದನ ರೆಡ್ಡಿ ಮತ್ತು ಕಂಪೆನಿಯ ಆಡಳಿತ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಸೋಮವಾರ ಬಳ್ಳಾರಿಯ ಅವರ ಮನೆಯ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡು ಬಂಧಿಸಿತ್ತು.

ನಂತರ ಅವರನ್ನು ಸೆ. 19ರ ವೆರೆಗೆ ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿತ್ತು. ವಿಚಾರಣೆಗಾಗಿ ಬಂಧಿತರನ್ನು 15 ದಿನಗಳ ಕಾಲ ತನ್ನ ವಶಕ್ಕೆ ನಿಡಬೇಕೆಂದು ಸಿಬಿಐ, ನ್ಯಾಯಾಲಯವನ್ನು ಕೋರಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT