ಬೆಂಗಳೂರು: ಹೈದರಾಬಾದ್– ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 371(ಜೆ)ರ ಕಲಂ ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಪಡೆಯುವ ಅರ್ಹರಿಗೆ ಪ್ರಮಾಣಪತ್ರ ಯಾರು ನೀಡಬೇಕು ಎನ್ನುವ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ.
ಅರ್ಹತಾ ಪ್ರಮಾಣ ಪತ್ರಗಳನ್ನು ಪಡೆಯಲು ರೂಪಿಸಿದ್ದ ನಿಯಮಾವಳಿಗಳಿಗೆ ಕಳೆದ ಶುಕ್ರವಾರ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಅನುಮೋದನೆ ನೀಡಿದೆ. ಇದೇ ನಿಯಮಾವಳಿಗಳನ್ನು ಮುಂದಿನ ಸಚಿವ ಸಂಪುಟದ ಮುಂದೆ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.