ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ನೀಡಿರುವ 15 ಕೋಟಿ ರೂ. ಅನುದಾನ ಸಾಕಾಗುವುದಿಲ್ಲ. ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮೊತ್ತವನ್ನು 200 ಕೋಟಿ ರೂಪಾಯಿಗೆ ವಿಸ್ತರಿಸಬೇಕು ಎಂದು ಅವರು ಮನವಿ ಮಾಡಿದರು. ರಾಮನಗರದಲ್ಲಿ ಸಂಘಟನೆಯ ಶಾಖೆಯ ಅಧ್ಯಕ್ಷರಾಗಿ ಗೋವಿಂದರಾಜು ಅವರನ್ನು ನೇಮಿಸಲಾಗಿದೆ ಇದರೊಂದಿಗೆ ಸಂಘಟನೆ ರಾಜ್ಯದ 23 ಜಿಲ್ಲೆಗಳಲ್ಲಿ ಶಾಖೆ ಹೊಂದಿದಂತಾಗಿದೆ ಎಂದು ಅವರು ತಿಳಿಸಿದರು.ಕರ್ನಾಟಕ ನವ ನಿರ್ಮಾಣ ಸೇನೆಯ ಪದಾಧಿಕಾರಿಗಳಾದ ಪ್ರಕಾಶ್ಮುರಳಿ, ಲಕ್ಷ್ಮೀಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.