ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ನಿವೃತ್ತಿ ವೇತನ ಯೋಜನೆ ಬೇಡ

Last Updated 21 ಮಾರ್ಚ್ 2011, 19:30 IST
ಅಕ್ಷರ ಗಾತ್ರ

 ಗುಲ್ಬರ್ಗ: ಷೇರು ಮಾರುಕಟ್ಟೆಯಾಧಾರಿತ ನಿವೃತ್ತಿ ವೇತನ ಯೋಜನೆ ವಿರೋಧಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಗುಲ್ಬರ್ಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತೆಯರು, ಪಿಂಚಣಿ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಆಗ್ರಹಿಸಿದರು.
 

ಹಲವು ಬಗೆಯ ಹೋರಾಟದ ಫಲವಾಗಿ ರಾಜ್ಯ ಸರ್ಕಾರ 2010ರ ಬಜೆಟ್‌ನಲ್ಲಿ ನಿವೃತ್ತಿ ವೇತನ ಕೊಡುವುದಾಗಿ ಪ್ರಕಟಿಸಿತು. ಆದರೆ ಆ ನಿವೃತ್ತಿ ವೇತನ ಎಲ್‌ಐಸಿ ಆಧಾರಿತ ಯೋಜನೆಯಾಗಬೇಕು ಎಂದು ಒತ್ತಾಯಿಸಿ ನವೆಂಬರ್ 15ರಿಂದ 19ರವರೆಗೆ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಹೋರಾಟ ನಡೆಸಿದರು. ಇದಕ್ಕೆ ಸರ್ಕಾರ ಸ್ಪಂದಿಸಿದಂತೆ ಮಾಡಿತಾದರೂ, ಈಗ ಹೊಸ ನಿವೃತ್ತಿ ಯೋಜನೆ ಜಾರಿ ಮಾಡಲು ಮಂದಾಗಿದೆ ಎಂದು ಅವರು ಆರೋಪಿಸಿದರು.

ನಿವೃತ್ತಿ ಬಯಸುವವರು ನಿವೃತ್ತಿಯಾಗುವವರೆಗೂ ಷೇರು ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆಯಿದ್ದು, ನಿವೃತ್ತಿಯಾಗುವ ತಿಂಗಳು ಅಥವಾ ವಾರದಲ್ಲಿ ಷೇರು ಮಾರುಕಟ್ಟೆ ಕುಸಿದರೆ ಸಂಪೂರ್ಣ ನಷ್ಟ ಅನುಭವಿಸಬೇಕಾಗುತ್ತದೆ. ಹಾಗಾಗಿ ಎಲ್‌ಐಸಿ ವಂತಿಗೆ ಆಧಾರಿತ ಯೋಜನೆ ಜಾರಿ ಮಾಡಿದರೆ ಪ್ರಯೋಜನವಾಗಲಿದೆ ಎಂದು ಅಧ್ಯಕ್ಷೆ ಶಾಂತ ಎನ್. ಘಂಟಿ ಹೇಳಿದರು.
 

“ಸಾರ್ವಜನಿಕ ಉದ್ದಿಮೆಯಾದ ಎಲ್‌ಐಸಿಗೆ ಕೇಂದ್ರ ಸರ್ಕಾರದ ಗ್ಯಾರಂಟಿ ಇದೆ. ದೇಶದಲ್ಲಿ ಭ್ರಷ್ಟಾಚಾರ ಇರದ ಏಕೈಕ ಸಂಸ್ಥೆಯೆಂದರೆ ಎಲ್‌ಐಸಿ ಮಾತ್ರ. ಹೀಗಾಗಿ ಎಲ್‌ಐಸಿ ವಂತಿಗೆ ಆಧಾರಿತ ಯೋಜನೆ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.ಖಜಾಂಚಿ ಪ್ರಭಾವತಿ, ಪ್ರಧಾನ ಕಾರ್ಯದರ್ಶಿ ಗೌರಮ್ಮ ಸೇರಿದಂತೆ ಇತರ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT