ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆಗೆ ನ.4ರಂದು ಮುಖ್ಯಮಂತ್ರಿ ಭೇಟಿ

Last Updated 23 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಹೊಸಕೋಟೆ: ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ನ. 4 ರಂದು ಹೊಸಕೋಟೆಗೆ ಭೇಟಿ ನೀಡಲಿದ್ದು, ಸುಮಾರು 200 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ಎಲೆ ಮಲ್ಲಪ್ಪ ಕೆರೆಯ ಹೆಚ್ಚುವರಿ ನೀರನ್ನು ಹೊಸಕೋಟೆ ದೊಡ್ಡ ಕೆರೆಗೆ ತರುವ ಏತ ನೀರಾವರಿ ಯೋಜನೆಗೆ ಚಾಲನೆ, ನೂತನ ಬಿಎಂಟಿಸಿ ಬಸ್ ಡಿಪೋ ಉದ್ಘಾಟನೆ, ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲೇ ಪ್ರಥಮವಾಗಿ 16 ರಿಂದ 18 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಗೆ ಜಾರಿಗೊಳಿಸಲಿರುವ ಕೌಶಲ್ಯ ತರಬೇತಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT