ಪಾವಗಡ: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, 2020ರ ವೇಳೆಗೆ ಭಾರತದ ವಿಜ್ಞಾನಿಗಳು ಮಂಗಳ ಗ್ರಹಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಕರ್ನಾಟಕ ವಿಜ್ಞಾನ ಪರಿಷತ್ ತಾಲ್ಲೂಕು ಘಟಕದ ನಿರ್ದೇಶಕ ಮಂಗಳವಾಡ ಮಂಜುನಾಥ್ ತಿಳಿಸಿದರು.
ಪಟ್ಟಣದ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ ವತಿಯಿಂದ ಮಂಗಳವಾರ ‘ಧೂಮಕೇತು ಹಾಗೂ ಸೌರವ್ಯೂಹ’ ಕುರಿತು ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.