ಹೊಸಕೋಟೆ: ಉದ್ಯೋಗ ಅವಕಾಶ ಕ್ಕಾಗಿ ಆಂಗ್ಲ ಭಾಷೆಯ ಜ್ಞಾನ ಅಗತ್ಯ ವಾಗಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಪರಿಣಾಮ ಕಾರಿಯಾಗಿ ಇಂಗ್ಲಿಷ್ ಕಲಿಸುವ ಅಗತ್ಯವಿದೆ ಎಂದು ಶಾಸಕ ಎನ್.ನಾಗರಾಜು ಅಭಿಪ್ರಾಯ ಪಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿ ಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸುವಲ್ಲಿ 2013–14 ನೇ ಸಾಲಿಗೆ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ತಾಲ್ಲೂ ಕಿಗೆ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.