ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಳಿಯ ತಿರುಮಲೇಶ್ವರ ಶಾಸ್ತ್ರಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಾಮ್ ಶೆಟ್ಟಿ ವಂದಿಸಿದರು. ಕಾರ್ಯದರ್ಶಿ ಚೈತ್ರಪಾರ್ವತಿ ಮತ್ತು ಉಷಾ.ಎ ಕಾರ್ಯಕ್ರಮ ನಿರೂಪಿಸಿದರು. ಸಹ ಅಧ್ಯಾಪಕ ಮಹಾಬಲೇಶ್ವರ ರಾವ್, ದೈಹಿಕ ಶಿಕ್ಷಕಿ ಮಲ್ಲಿಕಾ ಹೆಗ್ಡೆ ಸಹಕರಿಸಿದರು. ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಪ್ರತಿಭೆಗಳನ್ನು, ರಾಜ್ಯ ಮಟ್ಟದ ಶೈಕ್ಷಣಿಕ, ಸಾಹಿತ್ಯಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.