ಬೆಂಗಳೂರು: ‘ಅಲ್ಪತನದಿಂದ ವಿಶ್ವಮಾನವ ತತ್ವದೆಡೆಗೆ ಸಾಗುವ ಮೂಲಕ ಕುವೆಂಪು ಅವರಿಗೆ ನಿಜ ಅರ್ಥದಲ್ಲಿ ಗೌರವ ಸಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ತಿಳಿಸಿದರು.
ಕರ್ನಾಟಕ ವಿಶ್ವಮಾನವ ಸಂಸ್ಥೆಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸಾಹಿತ್ಯದ ಮೂಲಕವೇ ಮನುಕುಲಕ್ಕೆ ಹೊಸದಿಕ್ಕು ತೋರಿಸಿದ ಕುವೆಂಪು ಎಲ್ಲ ಕಾಲಕ್ಕೂ ಸಲ್ಲುವ ಬಹುದೊಡ್ಡ ಕವಿ’ ಎಂದು ಬಣ್ಣಿಸಿದರು.
‘ಶೈಕ್ಷಣಿಕ ವಲಯದಲ್ಲಿ ಹೆಚ್ಚಿನ ಸೇವೆ ಸಲ್ಲಿಸುತ್ತಿರುವ ದೊರೆಸ್ವಾಮಿ ಅವರಿಗೆ ಈ ಪ್ರಶಸ್ತಿ ಸಲ್ಲುತ್ತಿರುವುದು ಸಮರ್ಪಕವಾಗಿದೆ’ ಎಂದು ಶ್ಲಾಘಿಸಿದರು.
ಬೆಂಗಳೂರು ವಿ.ವಿ ವಿಶ್ರಾಂತ ಕುಲಪತಿ ಡಾ.ಎಂ.ಎಸ್.ತಿಮ್ಮಪ್ಪ, ‘ಕಳಪೆ ಗುಣಮಟ್ಟದ ಶಿಕ್ಷಣ
ನೀಡುವುದು ಕೂಡ ದೊಡ್ಡ ಅಪರಾಧ’ ಎಂದರು.
ಇದೇ ಸಂದರ್ಭದಲ್ಲಿ ಪಿಇಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಪ್ರೊ.ಎಂ.ಆರ್. ದೊರೆಸ್ವಾಮಿ ಅವರಿಗೆ ‘ವಿಶ್ವ ಮಾನವ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು.