ಯಲಹಂಕ: ‘ಸದಾ ಕುಟುಂಬ ನಿರ್ವಹಣೆಯ ಒತ್ತಡದಲ್ಲಿ ಸಿಲುಕಿರುವ ಮಹಿಳೆಯರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯ’ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಣಿಶ್ರೀ ವಿಶ್ವನಾಥ್ ತಿಳಿಸಿದರು.
ಶ್ರೀನಿವಾಸಪುರದ ಸಾಯಿಸಮೃದ್ಧಿ ಅಪಾರ್ಟ್ಮೆಂಟ್ ಆವರಣದಲ್ಲಿ ಆಯೋಜಿಸಿದ್ದ ಯಲಹಂಕ ಮಹಿಳೆ ಯರ ಕ್ರೀಡಾಕೂಟದಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವನಜಾಕ್ಷಿ, ಕ್ಷೇತ್ರದ ಬಿಜೆಪಿ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ವಸುಧಾ, ಮಾತೃ ಅಂಧರ ಶಿಕ್ಷಣಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಮುಕ್ತಾ ಇದ್ದರು.