ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹವೇ ಪರಿಹಾರ’

Last Updated 12 ಡಿಸೆಂಬರ್ 2013, 20:07 IST
ಅಕ್ಷರ ಗಾತ್ರ

ಬೆಂಗಳೂರು: ‘ಜಾತಿನಿರ್ಮೂಲನೆಗೆ ಅಂತ­ರ್ಜಾತಿ ವಿವಾಹವೇ ಪರಿಹಾರ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ದಲಿತ ಹೆಣ್ಣುಮಗಳನ್ನು ಮದುವೆ­ಯಾಗುವ ಮೂಲಕ ಈ ವಿಚಾರದಲ್ಲಿ ದೇಶದ ಯುವಕರಿಗೆ ಮಾದರಿಯಾಗ­ಬೇಕು’ ಎಂದು ಭಾರತೀಯ ರಿಪಬ್ಲಿಕನ್‌ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮ್‌ದಾಸ್‌ ಅಠಾವಳೆ ಹೇಳಿದರು.

ಸಮತಾ ಸೈನಿಕ ದಳ ಮತ್ತು ಭಾರ­ತೀಯ ರಿಪಬ್ಲಿಕನ್‌ ಪಕ್ಷ ನಗರದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮುಖಂಡರ ಸಮಾವೇಶದಲ್ಲಿ ಮಾತನಾಡಿದರು.

‘ದೇಶದಲ್ಲಿ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ­ಗಳು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಬೇಕು. ಅಂತರ್ಜಾತಿ ವಿವಾಹವಾದವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಮುಂದಾ­ಗ­ಬೇಕು’ ಎಂದು ಒತ್ತಾಯಿಸಿದರು.

‘ಭೂಸುಧಾರಣೆಯ ಕಾನೂನು­ಗಳು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಭೂರಹಿತ ದಲಿತರಿಗೆ ಜಮೀನು ಹಂಚಿಕೆ ಮಾಡಲು ಮುಖ್ಯ­ಮಂತ್ರಿ ಸಿದ್ದರಾಮಯ್ಯ ವಿಶೇಷ ಆಸಕ್ತಿ ವಹಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT