ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೂಜು ಅಡ್ಡೆಗಳ ಮೇಲೆ ದಿಢೀರ್‌ ದಾಳಿ’

Last Updated 13 ಡಿಸೆಂಬರ್ 2013, 6:30 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಮಟ್ಕಾ, ಮಾವಾ, ಜೂಜು ಅಡ್ಡೆಗಳ ಮೇಲೆ ದಿಢೀರ್‌ ದಾಳಿ ನಡೆಸುವಂತೆ ಪೊಲೀಸ್‌ ಅಧಿಕಾರಿ­ಗಳಿಗೆ ಸೂಚನೆ ನೀಡಲಾಗಿದ್ದು, ಅತೀ ಶೀಘ್ರವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆ­ಗಳಿಗೆ ಕಡಿ­ವಾಣ ಹಾಕುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಹೇಳಿದರು.

ನವನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಕಾನೂನು ಬಾಹಿರ ಚಟುವಟಿಕೆಗಳು ಜಿಲ್ಲೆಯಲ್ಲಿ ಕಂಡುಬಂದರೆ ಸಾರ್ವಜನಿಕರು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಇಲ್ಲವೇ ಜಿಲ್ಲಾ ಪೊಲೀಸ್‌ ಕಂಟ್ರೋಲ್‌ ರೂಂ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಮಾವಾ ಮಾರಾಟ ಮಾಡುವವರಿಗೆ ಪೊಲೀಸ್‌ ಸಿಬ್ಬಂದಿಯೇ ಬೆಂಬಲವಾಗಿ ನಿಂತಿದ್ದಾರೆ ಎಂಬ ಆರೋಪ ಕೇಳಿಬರುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುವ ಪೊಲೀಸ್‌ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟ್ರ್ಯಾಕ್ಟರ್‌ ಚಾಲಕರಿಗೆ ಎಚ್ಚರಿಕೆ
ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳನ್ನು ರಸ್ತೆ ಮೇಲೆ ಎಲ್ಲಂದರಲ್ಲಿ ನಿಲ್ಲಿಸುವ, ಓಡಿಸುವ ಹಾಗೂ ಟೇಪ್‌ ರಿಕಾರ್ಡ್  ಹಾಕಿಕೊಂಡು ಅತಿಯಾದ ಶಬ್ಧ ಮಾಡುವ ಚಾಲಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಕಬ್ಬು ಸಾಗಿಸುವ ಪ್ರತಿ ಟ್ರ್ಯಾಕ್ಟರ್‌ಗಳಿಗೂ ಕಟ್ಟು­ನಿಟ್ಟಾಗಿ ರಿಪ್ಲೆಕ್ಟರ್‌, ಇಂಡಿಕೇಟರ್‌ ಲೈಟ್‌ ಅಳ­ವಡಿ­ಸಬೇಕು, ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ­ಬೇಕು ಎಂದು ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಸೂಚನೆ ನೀಡಲಾ­ಗುವುದು ಎಂದು ತಿಳಿಸಿದರು. 

ಆಯುರ್ವೇದ ತಪಾಸಣೆ ನಾಳೆ
ಬಾಗಲಕೋಟೆ: ವಿದ್ಯಾಗಿರಿಯ ಧನ್ವಂತರಿ ಆಯು­ರ್ವೇದ ಆಸ್ಪತ್ರೆಯಲ್ಲಿ ಇದೇ 14 ರಂದು ಬೆಳಿಗ್ಗೆ 10 ರಿಂದ ರಾತ್ರಿ 8ರ ವರೆಗೆ ಎಲ್ಲ ತರಹದ ಸಂಧಿನೋವು, ಬಾವು, ಉರಿ ಊತ, ಕುತ್ತಿಗೆ, ಸೊಂಟ, ಬೆನ್ನುನೋವಿ­ನಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಆಯುರ್ವೇದ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT