ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡಿ. 20ರಂದು ಪ್ರಾಂತೀಯ ಶೈಕ್ಷಣಿಕ ಸಮ್ಮೇಳನ’

Last Updated 14 ಡಿಸೆಂಬರ್ 2013, 4:30 IST
ಅಕ್ಷರ ಗಾತ್ರ

ಬೀದರ್‌: ವಿದ್ಯಾಭಾರತಿ ಕರ್ನಾಟಕ ಸಂಸ್ಥೆಯು ಡಿ. 20 ರಿಂದ 22 ರವರೆಗೆ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾ­ಕೇಂದ್ರದಲ್ಲಿ ಆಯೋಜಿಸಿರುವ ಪ್ರಾಂತೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಬೀದರ್‌ ಜಿಲ್ಲೆಯಿಂದ 250 ಜನ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ವಿಭಾಗೀಯ ಪ್ರಧಾನ ಕಾರ್ಯದರ್ಶಿ ರೇವಣಸಿದ್ಧಪ್ಪ ಜಲಾದೆ ತಿಳಿಸಿದರು.

ಸ್ವಾಮಿ ವಿವೇಕಾನಂದರ 150ನೇ ಜಯಂತಿ ವರ್ಷಾಚರಣೆ ಪ್ರಯುಕ್ತ ಸಮ್ಮೇಳನ ಏರ್ಪಡಿಸಲಾಗಿದೆ. ವಿದ್ಯಾ­ಭಾರತಿ ಕರ್ನಾಟಕ ಸಂಸ್ಥೆಯ ಅಡಿಯಲ್ಲಿ ಜಿಲ್ಲೆಯಲ್ಲಿ ನಡೆಯು­ತ್ತಿರುವ 50 ಶಾಲೆಗಳ ಮುಖ್ಯ­ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು ಸಮ್ಮೇಳನಕ್ಕೆ ತೆರಳಲಿದ್ದಾರೆ ಎಂದು ಹೇಳಿದರು.

ಡಿ. 20 ರಂದು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ, ವಿದ್ಯಾಭಾರತಿ ಕರ್ನಾಟಕ ಬೆಳೆದು ಬಂದ ದಾರಿ ಹಾಗೂ ನಾಡು, ನುಡಿ ಕುರಿತ ಪ್ರದರ್ಶನ ಆಯೋಜಿಸಲಾಗಿದೆ. ಡಿ. 21 ರಂದು ಇಸ್ರೋ ಮಾಜಿ ಅಧ್ಯಕ್ಷ ಮಾಧವನ್‌ ನಾಯರ್ ಸಮ್ಮೇಳನ­ವನ್ನು ಉದ್ಘಾಟಿಸಲಿದ್ದಾರೆ. ಡಿ.22 ರಂದು ದೇಶದ ಆಂತರಿಕ,  ಕಲಿಕೆಯಲ್ಲಿ ಮಾತೃಭಾಷೆ ಮಹತ್ವ ವಿಷಯ ಕುರಿತ ಉಪನ್ಯಾಸ ನಡೆಯಲಿದೆ ಎಂದರು. ವಿದ್ಯಾಭಾರತಿ ಕರ್ನಾಟಕದ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ಎಸ್‌.ಬಿ. ಸಜ್ಜನಶೆಟ್ಟಿ, ಸಹ ಕಾರ್ಯದರ್ಶಿ ಧನರಾಜ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT