ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಡದಲ್ಲಿ 15 ಆಟಗಾರರಿಗೆ ಅವಕಾಶ ನೀಡಿ’

Last Updated 3 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಅಂತರ ಕಾಲೇಜು ಮತ್ತು ಅಂತರ ಶಾಲಾ ಟೂರ್ನಿಗಳಲ್ಲಿ  ಒಂದು ತಂಡದಲ್ಲಿ 11 ಆಟಗಾರರ ಬದಲು 15 ಆಟ ಗಾರರಿಗೆ ಅವಕಾಶ ನೀಡುವುದು ಒಳ್ಳೆ ಯದು ಎಂಬ ಸಲಹೆಯನ್ನು ಸಚಿನ್‌ ತೆಂಡೂಲ್ಕರ್‌ ಅವರು ಮುಂಬೈ ಕ್ರಿಕೆಟ್‌ ಸಂಸ್ಥೆಗೆ  ನೀಡಿದ್ದಾರೆ.

ಹಾಗಾದಲ್ಲಿ ಮುಂಬೈನಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿಭೆಗಳನ್ನು ಬೆಳಕಿಗೆ ತರಲು ಸಾಧ್ಯ ಎಂಬ ಅಭಿಪ್ರಾಯ ವನ್ನು ಅವರು ವ್ಯಕ್ತಪಡಿಸಿದ್ದಾರೆ.
ಎಂಸಿಎ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿನ್‌, ‘ಮುಂಬೈನಲ್ಲಿ ಕ್ರಿಕೆಟ್‌ ಬೆಳವಣಿಗೆಗೆ ಏನು ಮಾಡಬಹುದು ಎಂಬುದರ ಕುರಿತು ಒಂದು ದಿನ ನಾನು ಹಾಗೂ ಸಹೋದರ ಸಮಾ ಲೋಚನೆ ನಡೆಸಿದ್ದೆವು. ತಂಡವೊಂದ ರಲ್ಲಿ 15 ಆಟಗಾರರಿಗೆ ಅವಕಾಶ ನೀಡುವುದರಿಂದ ಇದು ಸಾಧ್ಯ ಎಂಬ ಅಂಶ ಆಗ ನನ್ನ ಮನಸ್ಸಿಗೆ ಹೊಳೆಯಿತು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT