ಕೆ. ಮಂಜು ನಿರ್ಮಿಸುತ್ತಿರುವ ‘ದಿಲ್ರಂಗೀಲ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಗಣೇಶ್ ನಾಯಕರಾಗಿರುವ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸುತ್ತಿದ್ದಾರೆ. ರಚಿತಾರಾಂ, ಪ್ರಿಯಾಂಕಾ ರಾವ್, ರಂಗಾಯಣ ರಘು, ಅಚ್ಯುತ ಕುಮಾರ್, ಯಮುನಾ, ಶ್ರೀನಿಧಿ, ಗಿರಿ ಇತರರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಎಚ್.ಸಿ. ವೇಣು ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಮುರಳಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಸಾಹಿತ್ಯ ರಚಿಸಿದ್ದಾರೆ. ಬೆಂಗಳೂರು, ಮೈಸೂರು, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.