ಕೃಷ್ಣರಾಜಪುರ: ‘ಶಾಲಾಮಟ್ಟ ದಲ್ಲಿಯೇ ದೇಸಿ ಕ್ರೀಡೆಗಳಾದ ಕಬಡ್ಡಿ, ಕೊಕ್ಕೊ ಮತ್ತಿತರ ಆಟಗಳನ್ನು ಮಕ್ಕಳಿಗೆ ಕಲಿಸಲು ಹೆಚ್ಚಿನ ಉತ್ತೇಜನ ನೀಡಬೇಕು’ ಎಂದು ಶಾಸಕ ಬೈರತಿ ಎ.ಬಸವರಾಜು ಸಲಹೆ ನೀಡಿದರು.
ಸ್ಥಳೀಯ ಅಂಬೇಡ್ಕರ್ ಕ್ರೀಡಾಂಗಣ ದಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ಮನೋಹರ್, ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಎಚ್. ನಾಗರಾಜ್ ಹಾಜರಿದ್ದರು.
ವಿವಿಧ ಶಾಲೆಗಳ 600ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.